ಬೆಂಗಳೂರು, ಮೇ 12: ಎಲ್ಲಾರನ್ನು ಯಾವಾಗಲೂ ನಕ್ಕು ನಗಿಸುತ್ತಾ ಇದ್ದವರು ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಅಕಾಲಿಕವಾಗಿ ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ನಿಧನರಾದರು ಎಂದು ವರದಿಯಾಗಿದೆ. ತುಂಬಾ ಕಷ್ಟದ ಜೀವನ ನೋಡಿ, ನಂತರ ಹಾಸ್ಯದ ಮೂಲಕ ಎಲ್ಲರ ಮನ ಗೆದ್ದರು. ತುಂಬಾ ಅವಮಾನಗಳನ್ನು ಮೆಟ್ಟಿ ನಿಂತರು. ರಂಗಭೂಮಿ ಮತ್ತು ಕಿರುತೆರೆ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ರಾಕೇಶ್ ಪೂಜಾರಿ ಅವರು ತಮ್ಮ ಅದ್ಭುತ ಹಾಸ್ಯ ಪ್ರತಿಭೆಯಿಂದ ಅನೇಕರ ಮನ ಗೆದ್ದಿದ್ದು, ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನ ಗಳಿಸಿದ್ದರು.
ವಿಶ್ವರೂಪ್ ಎಂದೇ ರಾಕೇಶ್ ಪೂಜಾರಿ ಜನಪ್ರಿಯತೆ ಪಡೆದಿದ್ದರು. ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಅವರು ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಇದ್ದರು. ಆದರೆ, 'ಕಾಮಿಡಿ ಕಿಲಾಡಿಗಳು' ವೇದಿಕೆ ಅವರ ಬದುಕನ್ನು ಬದಲಿಸಿತು. 'ಕಾಮಿಡಿ ಕಿಲಾಡಿಗಳು' ಮೂರನೇ ಸೀಸನ್ನಲ್ಲಿ ಅವರು ವಿನ್ನರ್ ಆಗಿದ್ದರು. ಹಲವು ವರ್ಷಗಳಿಂದಲೂ ಅವರ ರಂಗಭೂಮಿ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು. ಕಾಮಿಡಿ ಕಿಲಾಡಿಗಳು ವಿನ್ನರ್ ಆಗ್ಬೇಕು ಎಂಬ ಕನಸು ಕಂಡಿದ್ದ ರಾಕೇಶ್ ಪೂಜಾರಿ ಅವರು ಬಹುದಿನ ಕನಸು ನನಸಾಗಿದೆ ಎಂದು ಬರೆದುಕೊಂಡಿದ್ದರು.ಕಷ್ಟ ಪಟ್ಟು, ತುಂಬಾ ಅವಮಾನಗಳನ್ನು ಮೆಟ್ಟಿ ನಿಂತು ಉತ್ತಮ ಬದುಕು ಕಟ್ಟಿಕೊಂಡಿದ್ದ 'ಕಾಮಿಡಿ ಕಿಲಾಡಿಗಳು' ಖ್ಯಾತಿಯ ನಟ ರಾಕೇಶ್ ಪೂಜಾರಿ ನಿಧನ ಹೊಂದಿದ್ದಾರೆ. ಹಾಗಂತ ಇದು ವದಂತಿ ಅಲ್ಲ. ಈ ಸುದ್ದಿ ನಂಬಲು ಅಸಾಧ್ಯ ಎನಿಸಿದರೂ ಸತ್ಯವೇ. ಆರೋಗ್ಯವಾಗಿದ್ದ ನಟ ರಾಕೇಶ್ ಪೂಜಾರಿ ಅವರು ಬಾಳಿ ಬದುಕ ಬೇಕಿದ್ದ ಅವರು ಕೊನೆಯುಸಿರು ಎಳೆದಿದ್ದಾರೆ. ಹೃದಯಾಘಾತದಿಂದ ಅವರು ನಿಧನ ಹೊಂದಿದ್ದಾರೆ ಎಂದು ಸದ್ಯ ತಿಳಿದು ಬಂದಿದ್ದು, ರಾಕೇಶ್ ಪೂಜಾರಿ ಸಾವಿನ ವಿಚಾರವನ್ನು ನಟ ಹಾಗೂ ಅವರ ಆಪ್ತ ಶಿವರಾಜ್ ಕೆಆರ್ ಪೇಟೆ ಅವರು ಖಚಿತಪಡಿಸಿದ್ದಾರೆ. ಸಾವಿಗೆ ಅವರ ಆಪ್ತ ಬಳಗ ಶಾಕ್ ಆಗಿದೆ. ರಾಕೇಶ್ ಪೂಜಾರಿ ಅವರ ಸಾವಿಗೆ ಅಭಿಮಾನಿಗಳು ಹಾಗೂ ಆಪ್ತರು ಕಂಬನಿ ಮಿಡಿಯುತ್ತಿದ್ದಾರೆ.
